ಆಪರೇಷನ್‍ಗೆ ಒಪ್ಪಿಗೆ ಕೊಟ್ಟ ದರ್ಶನ್.

12

ರೇಣುಕಾಸ್ವಾಮಿ ಹತ್ಯೆ ಕೇಸ್‍ನಲ್ಲಿ ಜೈಲು ಸೇರಿದ್ದ ದರ್ಶನ್ ಅವರು ಈಗ ಜಾಮೀನು ಪಡೆದು ಹೊರ ಬಂದಿದ್ದಾರೆ. ಅವರಿಗೆ ಬೆನ್ನು ನೋವು ಹೆಚಾಗಿ ಕಾಡಿತ್ತಿತ್ತು. ಡಿಸ್ಕ್‍ನ ಸಮಸ್ಯೆಯಿಂದಾಗಿ ಈ ರೀತಿ ಆಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈಗ ದರ್ಶನ್ ಅವರಿಗೆ ಆಪರೇಷನ್ ಮಾಡಿಸೋದು ಅನಿವಾರ್ಯ ಆಗಿದೆ. ಅವರಿಗೆ ಬೆನ್ನು ನೋವು ವಾಸಿಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಬೇರೆ ದಾರಿ ಕಾಣದೆ ಅವರು ಆಪರೇಷನ್‍ಗೆ ಒಪ್ಪಿಗೆ ಕೊಟ್ಟಿದ್ದಾರೆ. ದರ್ಶನ್ ಅವರು ಐಷಾರಾಮಿ ಆಗಿ ಜೀವನ ನಡೆಸಿದವರು. ಈ ಕಾರಣಕ್ಕೆ ಜೈಲು ವಾಸ ಅವರಿಗೆ ಕಷ್ಟ ಆಯಿತು. ಜೈಲಿನಲ್ಲಿ ಮಲಗಲು, ಕೂರಲು ಅವರಿಗೆ ಬೇಕಾದ ರೀತಿಯ ವ್ಯವಸ್ಥೆ ಇಲ್ಲದ ಕಾರಣ ಬೆನ್ನು ನೋವು ಶುರುವಾಗಿತ್ತು. ದರ್ಶನ್ ಅವರು ಆಪರೇಷನ್ ನೀಡಿ ಮಧ್ಯಂತರ ಜಾಮೀನು ಪಡೆದರು. ಇಷ್ಟು ದಿನಗಳ ಕಾಲ ಅವರು ಫಿಸಿಯೋ ಥೆರಪಿ ಮೂಲಕ ನೋವನ್ನು ಕಡಿಮೆ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದರು. ಆದರೆ, ಅದು ಸಾಧ್ಯವಾಗಲಿಲ್ಲ. ಹೀಗಾಗಿ, ಅವರು ಆಪರೇಷನ್ ಮಾಡಿಸಿಕೊಳ್ಳುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಸಂಕ್ರಾತಿ ವೇಳೆಗೆ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದಾರೆ. ಮೈಸೂರಿನಲ್ಲಿಯೇ ಆಪರೇಷನ್ ನಡೆಯುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ದರ್ಶನ್ ಅವರಿಗೆ ವೈದ್ಯ ಅಜಯ್ ಹೆಗಡೆ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಕಡೆಯಿಂದ ಈಗ ವರದಿ ಲಭ್ಯವಾಗಿದೆ.