ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತು ಕಾರ್ಯಕರ್ತರ ಜೊತೆಯಲ್ಲಿ ಬಂದು ಮತದಾನ ಮಾಡಿ ಮಾತನಾಡಿದ್ದು, ಪ್ರಜಾಪ್ರಭುತ್ವದಲ್ಲಿ ಸಂವಿಧಾನ ನೀಡಿದ ಹಕ್ಕನ್ನು ನಾನು ಚಲಾಯಿಸಿದ್ದೇನೆ. ಕ್ಷೇತ್ರದಲ್ಲಿ ಉತ್ತಮ ಜನಾಭಿಪ್ರಾಯವಿದ್ದು, ನನ್ನನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.










