ಬೆಂಗಳೂರು : ಕೊರೊನಾ ಲಸಿಕೆ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆಯಾಗಬೇಕು ಎಂದು ಒತ್ತಾಯಿಸಿ ಪ್ರಧಾನಿ ಮೋದಿಯವರಿಗೆ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.
ದೇಶದಾದ್ಯಂತ 3ನೇ ಹಂತದ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ದಾಟಿದವರಿಗೆ ಹಾಗೂ ರೋಗಿಗಳಿಗೆ ಲಸಿಕೆ ನೀಡಲಾಗುತ್ತಿದೆ. ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಂಚಿಕೆ ಕಡಿಮೆ ಆಗಿದೆ. ಲಸಿಕೆ ವಿತರಣೆ ತ್ವರಿತಗೊಳಿಸುವಂತೆ ಪತ್ರದಲ್ಲಿ ಅವರು ಒತ್ತಡ ಹೇರಿದ್ದಾರೆ.










