ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನಲೆ ನಾಳೆಯಿಂದ ತುರ್ತು ಪ್ರಕರಣಗಳ ವಿಚಾರಣೆಗಳನ್ನು ಮಾತ್ರ ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದ್ದು, ಕಳೆದ ವರ್ಷ ಜುಲೈ 4ರಂದು ಸರ್ಕಾರ ಹೊರಡಿಸಿದ್ದ ಕೋವಿಡ್ ಶಿಷ್ಠಾಚಾರಗಳನ್ನು ಅನುಸರಿಸಿಕೊಂಡು ಹಾಗೂ ಅದಕ್ಕೆ ಮೊದಲು ಹೊರಡಿಸಿದ್ದ ಸುತ್ತೋಲೆಯಂತೆ ನಾಳೆಯಿಂದ ತುರ್ತು ಪ್ರಕರಣಗಳ ವಿಚಾರಣೆಗಳನ್ನು ಮಾತ್ರ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸುತ್ತೋಲೆಯಲ್ಲಿ ತಿಳಿಸಿದೆ.










