ಚಾರ್ಮಾಡಿ ಘಾಟ್‍ನಲ್ಲಿ ಕಾಡ್ಗಿಚ್ಚು: ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ.

31

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್‍ನ ಬಿದಿರು ತಳ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ಬಗ್ಗೆ ವಿವರವಾದ ಮಾಹಿತಿ ಸಲ್ಲಿಸುವಂತ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ನಿನ್ನೆ ಸೂಚನೆ ನೀಡಿದೆ. ಕಾಡ್ಗಿಚ್ಚಿನಿಂದ ಆಗಿರುವ ಹಾನಿ, ತಡೆಗಟ್ಟಲು ಕೈಗೊಂಡಿರುವ ಕ್ರಮಗಳು ಹಾಗೂ ಬೆಂಕಿ ನಂದಿಸಲು ತೆಗೆದುಕೊಂಡ ಸಮಯದ ಕುರಿತು ಏಳು ದಿನಗಳೊಳಗೆ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆಯವರು ಸೂಚನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆಯವರು, ಯಾವುದೇ ರೀತಿಯ ಪರಿಸ್ಥಿತಿ ಎದುರಾದರೂ ಸನ್ನದ್ಧರಾಗಿರುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಇಲಾಖೆಯ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ, ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಡ್ಗಿಚ್ಚು ತಡೆಯಲು, ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿ, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.