ನರೇಂದ್ರ ಮೋದಿಯವರಿಗೆ ಅಭಿನಂದನೆ ತಿಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ…

260
firstsuddi

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ತಳಿಸಿದ್ದು, ಈ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಮತ್ತು ಮುಖ್ಯಪಾತ್ರ ವಹಿಸಿದ್ದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಮುಂದಿನ ಐದು ವರ್ಷ ಜನ ಮೆಚ್ಚುವಂತಹ, ಇಡೀ ದೇಶವನ್ನು ಕುವೆಂಪು ಅವರು ಹೇಳಿರುವಂತೆ ‘’ಸರ್ವಜನಾಂಗದ ಶಾಂತಿಯ ತೋಟ’’ವನ್ನಾಗಿ ಮಾಡುವ ರೀತಿಯಲ್ಲಿ ಆಡಳಿತ ನೀಡಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.