ಶಿವಮೊಗ್ಗ: ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ…

198
firstsuddi

ಶಿವಮೊಗ್ಗ: ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಜೂನ್ 15ರಿಂದ ಅಕ್ಟೋಬರ್ 15ರವರೆಗೆ ತೀರ್ಥಹಳ್ಳಿ, ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ. ವಾಹನಗಳು ಶಿವಮೊಗ್ಗ, ತೀರ್ಥಹಳ್ಳಿ, ಆಗುಂಬೆ, ಶೃಂಗೇರಿ-ಕೆರೆಕಟ್ಟೆ, ಕಾರ್ಕಳ-ಉಡುಪಿ ಮಂಗಳೂರು ಮಾರ್ಗ ಅಥವಾ ಶಿವಮೊಗ್ಗ, ತೀರ್ಥಹಳ್ಳಿ, ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರ, ಉಡುಪಿ ಮಾರ್ಗದಲ್ಲಿ ಸಂಚರಿಸಬಹುದಾಗಿದೆ ಎಂದು ತಿಳಿಸಿದ್ದಾರೆ. ಹಿಂದಿನ ಮಳೆಗಾಲದಲ್ಲಿ ತಿರುವಿನ ರಸ್ತೆ ದೊಡ್ಡ ಪ್ರಮಾಣದಲ್ಲಿ ಕುಸಿದು ಅಪಾಯ ಎದುರಾಗಿತ್ತು. ಹಾಗಾಗಿ, ಸ್ಥಳ ಪರಿಶೀಲನೆ ನಡೆಸಿದ ರಾಷ್ಟ್ರಿಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸಾರಿಗೆ ಅಧಿಕಾರಿಗಳು ನಿಷೇಧ ಅಗತ್ಯ ಎಂದು ವರದಿ ಸಲ್ಲಿಸಿದ್ದರು.