ಬೆಂಗಳೂರು : ಹಿಂದೂಗಳು, ಹಿಂದೂಗಳ ವಾಹನದಲ್ಲೇ ದೇವಾಲಯಕ್ಕೆ ಹೋಗಲಿ ಎಂದು ಭಾರತ್ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಬಂಗೇರಾ ಹೊಸ ಅಭಿಯಾನಕ್ಕೆ ಕರೆ ಕೊಟ್ಟಿದ್ದಾರೆ.
ಈಗಾಗಲೇ ಹಿಂದೂ ಸಮಾಜ ಒಂದಾಗಿ ಸಾಕಷ್ಟು ಅಭಿಯಾನ ಮಾಡಿ ಯಶಸ್ವಿಯಾಗಿದೆ. ಈಗ ನಾವು ಮತ್ತೊಂದು ಹೊಸ ಅಭಿಯಾನ ಆರಂಭ ಮಾಡಬೇಕಿದೆ. ಯಾರು ನಮ್ಮ ದೇವರನ್ನು ನಂಬುವುದಿಲ್ಲ. ನಮ್ಮ ದೇಶದ ಕಾನೂನಿಗೆ ಬೆಲೆ ಕೊಡುವುದಿಲ್ಲವೋ ಅವರ ವಾಹನದಲ್ಲಿ ಹೋಗಿ ನಮ್ಮ ದೇವರಿಗೆ ಹರಕೆ ಪೂಜೆ ಸಲ್ಲಿಸುತ್ತಿದ್ದೇವೆ. ಆದರೆ ಇಂದಿನಿಂದ ಹಿಂದೂ ಚಾಲಕರ ಜೊತೆಯಲ್ಲೇ ನಮ್ಮ ಧಾರ್ಮಿಕ ಕ್ಷೇತ್ರಕ್ಕೆ ಹೋಗಬೇಕು. ಈ ಮೂಲಕ ಹಿಂದೂ ಚಾಲಕರಿಗೆ ನಾವು ಆರ್ಥಿಕವಾಗಿ ಬೆಂಬಲ ನೀಡಬೇಕು ಎಂದಿದ್ದಾರೆ.
ಗೋಮಾಂಸ ತಿನ್ನುವ ಚಾಲಕರೊಂದಿಗೆ ಧರ್ಮ ಕ್ಷೇತ್ರಕ್ಕೆ ಹೋಗುವ ಬದಲು, ನಮ್ಮ ಹಿಂದೂ ಸಮಾಜದ ಚಾಲಕರ ವಾಹನದಲ್ಲಿ ಯಾತ್ರೆಗೆ ಹೋಗೋಣ. ಇದರಿಂದ ನಮ್ಮ ಸಮಾಜದ ಚಾಲಕರಿಗೆ ಆರ್ಥಿಕ ಸಹಾಯ ಮಾಡೋಣ. ಈ ಅಭಿಯಾನಕ್ಕೆ ಹಿಂದೂ ಸಂಘಟನೆಗಳು ಬೆಂಬಲ ನೀಡಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.