ಬೆಂಗಳೂರು : ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ನಿಯೋಗ ಮನವಿ ಮಾಡಿದ್ದು, ಮೈತ್ರಿ ಸರ್ಕಾರಕ್ಕೆ ಬೇಸತ್ತು ಶಾಸಕರು ರಾಜೀನಾಮೆಯನ್ನು ನೀಡಿದ್ದಾರೆ. ಅತೃಪ್ತ ಶಾಸಕರ ನೋವು ರಾಜೀನಾಮೆ ಪತ್ರದಲ್ಲೇ ಗೊತ್ತಾಗುತ್ತದೆ. ಹೀಗಾಗಿ ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸುವಂತೆ ಸ್ಪೀಕರ್ ಗೆ ಬಿಜೆಪಿ ನಿಯೋಗ ಮನವಿ ಮಾಡಿದೆ.










