ಇಂದಿನಿಂದ ಶಾಲೆ ಆರಂಭ ; ಮಕ್ಕಳಿಗೆ ಶುಭ ಕೋರಿದ ಸಿಎಂ ಬೊಮ್ಮಾಯಿ.

47
firstsuddi

ಬೆಂಗಳೂರು: ಇಂದಿನಿಂದ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳಿಗೆ ಆಗಮಿಸಿರುವ ಮಕ್ಕಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿದ್ದಾರೆ.

ನಗರದಲ್ಲಿ ಖಾಸಗಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳ ನಂತರ ಶಾಲೆ ಆರಂಭವಾಗುತ್ತಿದೆ. ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಮಕ್ಕಳಿಗೆ ಒಳ್ಳೆಯ ವಾತಾವರಣ ನಿರ್ಮಾಣವಾಗಲಿ ಎನ್ನುವ ಆಶಯ ನಮ್ಮದು. ಶಾಲೆಯಲ್ಲಿಯೇ ಕಲಿತಾಗ ಮಕ್ಕಳಿಗೆ ಒಳ್ಳೆಯ ಪರಿಣಾಮ ಆಗುತ್ತದೆ ಎಂದರು. ಇದೇ ವೇಳೆ ಶಾಲಾ ಮಕ್ಕಳಿಗೆ ಶೀಘ್ರದಲ್ಲಿಯೇ ಪಠ್ಯಪುಸ್ತಕ, ಸಮವಸ್ತ್ರದ ಜೊತೆ ಸೈಕಲ್ ವಿತರಣೆ ಮಾಡುವ ಭರವಸೆ ನೀಡಿದ್ದಾರೆ.