ಇಂದು ಮಹಾಶಿವರಾತ್ರಿ – ನಾಡಿನ ಜನತೆಗೆ ಶುಭಕೋರಿದ ಸಿಎಂ ಬೊಮ್ಮಾಯಿ.

73
firstsuddi

ಬೆಂಗಳೂರು : ಇಂದು ನಾಡಿನಾದ್ಯಂತ ಮಹಾ ಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನತೆಗ ಶುಭಾಶಯಗಳನ್ನು ಕೋರಿದ್ದಾರೆ.

ನಾಡಿನ ಸಮಸ್ತ ಮಹಾಜನತೆಗೆ ಮಹಾಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಸಂಕಷ್ಟಗಳೆಲ್ಲವನ್ನೂ ಪರಿಹರಿಸಿ, ಆ ಮಹಾಮಹೀಶ್ವರ ಸಕಲ ಜೀವರಾಶಿಗಳಿಗೂ ಒಳಿತನ್ನು ಮಾಡಲೆಂದು ವಿಶೇಷವಾಗಿ ಪ್ರಾರ್ಥಿಸುತ್ತೇನೆಂದು ಟ್ವೀಟ್ ಮಾಡಿದ್ದಾರೆ.