ಬಳ್ಳಾರಿ : ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಪಾರ್ವತಿ (37), ಶ್ರೇಯಾ (16) ಹಾಗೂ ಮಾನಸ (13) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸದ್ಯ ಮೃತ ಪಾರ್ವತಿ ಪತಿ ಶಂಕರ್ ಅವರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದ್ದು, ಪಿ.ಡಿ.ಹಳ್ಳಿ ಹಾಗೂ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










