ಬೆಂಗಳೂರು,: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು,ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಮಾಧ್ಯಮದವರೊಂದಿಗೆ ಮಾತನಾಡಿದ ಇವರು ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು.
ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರಗೃಹ ಸಚಿವ ಅಮಿತ್ ಶಾ ಅವರಿಗೆ ದೂರುನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅವರೂ ಪೋಲೀಸಿನವರೇ ಎಂದರು.










