ನವದೆಹಲಿ : ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.
ಕಳೆದ ವರ್ಷವೂ ಕೋವಿಡ್ ಭೀತಿ ಹಿನ್ನಲೆಯಲ್ಲಿ ಯಾವುದೇ ವಿದೇಶಿ ಅತಿಥಿಗಳಿಗೆ ಆಹ್ವಾನ ನೀಡಿರಲಿಲ್ಲ. ಇದೀಗ ಈ ಬಾರಿಯೂ ಕೂಡ ವಿದೇಶಿ ಅತಿಥಿಗಳನ್ನು ಆಹ್ವಾನಿಸುತ್ತಿಲ್ಲ.
ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ಜ.27 ರಂದು ಪ್ರಧಾನಿ ನರೇಂದ್ರ ಮೋದಿ ಭಾರತ-ಕೇಂದ್ರ ಏಷ್ಯಾ ವರ್ಚ್ಯುಯಲ್ ಶೃಂಗಸಭೆಯನ್ನು ಆಯೋಜಿಸಲಿದ್ದಾರೆ.










