ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಸ್ಥಳೀಯ ರೈತರ ಹಾಗೂ ದಕ್ಷಿಣ ಕನ್ನಡ, ಉಡುಪಿ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಕೇಂದ್ರ ಸರ್ಕಾರಕ್ಕೆ ಹಾಗೂ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರಿಗೆ ಶೋಭಾ ಕರಂಜ್ಲಾಜೆ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಸ್ಥಳೀಯ ರೈತರ ಹಾಗೂ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಕೇಂದ್ರ ಸರಕಾರಕ್ಕೆ ಹಾಗೂ ಕೇಂದ್ರ ಸಚಿವರಾದ ಶ್ರೀ @PiyushGoyal ಅವರಿಗೆ ಅನಂತ ಧನ್ಯವಾದಗಳು.#SKinConstituency pic.twitter.com/CKNBjCrjoi
— Shobha Karandlaje (@ShobhaBJP) January 7, 2022










