ಬೆಂಗಳೂರು: ಕಳ್ಳತನಕ್ಕೆ ಸಾಥ್ ನೀಡಿದ ಆರೋಪದ ಮೇಲೆ ಪೊಲೀಸ್ ಕಾನ್ಸ್ಟೇಬಲ್ ನನ್ನು ಅಮಾನತುಗೊಳಿಸಲಾಗಿದೆ.
ನಗರದ ಬನಶಂಕರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಯಲ್ಲಪ್ಪ ಎಂಬಾತನನ್ನು ಸಸ್ಪೆಂಡ್ ಮಾಡಲಾಗಿದೆ. ಕೆಲದಿನಗಳ ಹಿಂದೆ ಮನೆ ಕಳ್ಳತನ ಮಾಡಿದ ಪ್ರಕರಣವೊಂದರಲ್ಲಿ ಬನಶಂಕರಿ ಪೊಲೀಸರು ಕಳ್ಳರನ್ನು ಸೆರೆಹಿಡಿದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಕಳ್ಳರು ಕಳ್ಳತನದಲ್ಲಿ ಅದೇ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಯಲ್ಲಪ್ಪನವರ ಪಾತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಆಧಾರದ ಮೇಲೆ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಅವರು ಯಲ್ಲಪ್ಪನವರನ್ನು ವಿಚಾರಣೆ ನಡೆಸಿ ಅಮಾನತುಗೊಳಿಸುವಂತೆ ಆದೇಶ ನೀಡಿದ್ದಾರೆ.










