ಕಾಫಿನಾಡಿನಲ್ಲಿ ಮತ್ತೆ ಧರ್ಮ ದಂಗಲ್ ; ಅನ್ಯಕೋಮಿನವರ ವ್ಯಾಪಾರಕ್ಕೆ ನಿರ್ಬಂಧ ಹೇರುವಂತೆ ಮನವಿ…

41
firstsuddi

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಮತ್ತೆ ಧರ್ಮ ದಂಗಲ್ ಮುನ್ನೆಲೆಗೆ ಬಂದಿದೆ. ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಅನ್ಯ ಕೋಮಿನ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವಂತೆ ಹಿಂದೂ ಸಂಘಟನೆಗಳು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿವೆ.

ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಕಿಗ್ಗಾ ಋಷ್ಯಶೃಂಗೇಶ್ವರ ದೇವಾಲಯದಲ್ಲಿ ಇದೇ ಮಾರ್ಚ್ 19ರಂದು ಜಾತ್ರಾ ಮಹೋತ್ಸವ ನಡೆಯಲಿದೆ. ಅನ್ಯ ಕೋಮಿನವರು ಹೈಕೋರ್ಟ್ ಆದೇಶದ ಬಳಿಕವೂ ರಾಜ್ಯದಲ್ಲಿ ಬಂದ್ ಮಾಡಿ ಈ ಮಣ್ಣಿನ ಕಾನೂನಿಗೆ ಬೆಲೆ ಇಲ್ಲದಂತೆ ಮಾಡಿದ ಹಿನ್ನೆಲೆಯಲ್ಲಿ ಅನುಮತಿ ನೀಡಬಾರದು ಎಂದು ಮನವಿ ಮಾಡಿದೆ.

ಹಿಂದೂಗಳ ಜಾತ್ರೆ-ಸಭೆ, ಸಮಾರಂಭದಲ್ಲಿನ ವ್ಯಾಪಾರದಲ್ಲಿ ಬಂದ ಲಾಭವನ್ನು ದೇಶವಿರೋಧಿ ಚಟುವಟಿಕೆಗಳಿಗೆ ಬಳಸುತ್ತಾರೆಂಬ ಸಂದೇಹವಿದೆ. ಜೊತೆಗೆ ದೇವಾಲಯ ಹಾಗೂ ಹಳ್ಳಿಯ ಸೂಕ್ಷ್ಮ ವಿಚಾರಗಳನ್ನು ಗಮನಿಸುತ್ತಾರೆ. ಹಾಗಾಗಿ ನಮ್ಮ ಜಾತ್ರೆಗೆ ಅವರು ವ್ಯಾಪಾರಕ್ಕೆ ಬರುವುದು ಬೇಡವೆಂದು ನಿರ್ಬಂಧಿಸುವಂತೆ ʼಜಾಗೃತ ಹಿಂದೂ ಬಾಂಧವರʼ ಹೆಸರಿನಲ್ಲಿ ಮನವಿ ಮಾಡಲಾಗಿದೆ.