ಕ್ಯಾನ್ಸರ್ ಪೀಡಿತ ಸ್ನೇಹಿತೆಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ರೇಷ್ಮಾ ರಾಮದಾಸ್…

186
firstsuddi

ಮಂಗಳೂರು : ಹೆಣ್ಣು ಮಗಳೊಬ್ಬಳು ತನ್ನ ಸುಂದರ ಕೇಶವನ್ನು ತನ್ನ ಪ್ರೀತಿಯ ಕ್ಯಾನ್ಸರ್ ಪೀಡಿತ ಸ್ನೇಹಿತೆಗೆ ದಾನ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯೊಬ್ಬಳು ನಾರಿ ಸುಂದರವಾಗಿ ಕಾಣಲು ಕೇಶರಾಶಿ ಕೂಡಾ ತುಂಬಾ ಮುಖ್ಯ. ಆದರೆ ಸೌಂದರ್ಯದ ಸಂಕೇತವಾದ ಕೂದಲನ್ನು ದಾನ ಮಾಡುವುದೆಂದರೆ, ಹೆಣ್ಣು ಮಕ್ಕಳಿಗೆ ಅದೊಂದು ಸಂಕಟವೇ ಸರಿ. ಅಂಥದ್ದರಲ್ಲಿ ಸುಳ್ಯ ಮೂಲದ ಸದ್ಯ ಮಂಗಳೂರು ನಿವಾಸಿಯಾಗಿರುವ ರೇಶ್ಮಾ ರಾಮದಾಸ್ ಈ ಮಹತ್ಕಾರ್ಯ ಮಾಡಿದ್ದಾರೆ. ಈಗ ಮಂಗಳೂರಿನ ಶಕ್ತಿ ನಗರ ನಿವಾಸಿಯಾಗಿರುವ ರೇಶ್ಮಾ ರಾಮದಾಸ್ ಅವರು ಕ್ಯಾನ್ಸರ್ ಪೀಡಿತ ಹುಡಿಗಿ ಅಥವಾ ಮಹಿಳೆ ಮುಖದಲ್ಲಿ ಮಂದಹಾಸ ಮೂಡಿಸಲು ತನ್ನ ಸುಂದರವಾದ ಕೂದಲನ್ನು ದಾನ ಮಾಡಿದ್ದಾರೆ.
ಎರಡು ವರ್ಷಗಳ ಹಿಂದೆ, ನನ್ನ ಸ್ನೇಹಿತೆ ತನ್ನ ಕೂದಲನ್ನು ದಾನ ಮೂಡಿದ್ದಳು, ಆಕೆಯನ್ನು ನೋಡಿ ಪ್ರೇರಣೆಗೊಂಡು ನಾನು ಕೂಡಾ ಕೂದಲು ದಾನ ಮಾಡಿದ್ದೇನೆ. ಕೂದಲನ್ನು ಹೇಗೆ ದಾನ ಮಾಡಬಹುದು ಮತ್ತು ಯಾರನ್ನು ಸಂಪರ್ಕಿಸಬೇಕು ಎಂದು ನನಗೆ ತಿಳಿದಿರಲಿಲ್ಲ. ನನ್ನ ಕೂದಲನ್ನು ದಾನ ಮಾಡಲು ಒಂದು ಸುವರ್ಣಾವಕಾಶವಾಗಿತ್ತು, ಇದಕ್ಕಾಗಿ ನಾನು ಸಂತೋಷದಿಂದ ಒಪ್ಪಿಕೊಂಡೆ. ಕ್ಯಾನ್ಸರ್ ರೋಗಿಗಳಿಗೆ ನಾವು ಏನನ್ನಾದರೂ ನೀಡಿದಾಗ ಅವರು ಹೇಗೆ ಸಂತೋಷ ಪಡುತ್ತಾತೆ ಎಂಬ ವೀಡಿಯೋಗಳನ್ನು ನಾನು ನೋಡಿದ್ದೆ. ಹೀಗಾಗಿ ನನ್ನ ಕೂದಲನ್ನು ತ್ರಿಶೂರ್‍ನಲ್ಲಿರುವ ಹೇರ್ ಬ್ಯಾಂಕ್‍ಗೆ ದಾನ ಮಾಡಲು ನಿರ್ಧರಿಸಿದೆ. ಈ ನಿರ್ಧಾರದಲ್ಲಿ ನನ್ನ ಪತಿ ನನ್ನನ್ನು ಬೆಂಬಲಿಸಿದರು. ಕ್ಯಾನ್ಸರ್ ರೋಗಿಯ ಮುಖದಲ್ಲಿ ಮಂದಹಾಸವನ್ನು ತರುವುದಕ್ಕಾಗಿ ನನ್ನ ಕೂದಲನ್ನು ದಾನ ಮಾಡಿರುವುದರಿಂದ ನಾನು ತುಂಬಾ ಖುಷಿಪಟ್ಟಿದ್ದೇನೆ ಎಂದು ರೇಷ್ಮಾ ತಿಳಿಸಿದ್ದಾರೆ.
ರೇಷ್ಮಾ ಅವರು ಸುಳ್ಯದ ರಥಬೀದಿಯಲ್ಲಿ ಮಂಜುನಾಥ ಆಯಿಲ್ ಮಿಲ್ ನಡೆಸುತ್ತಿರುವ ಕೇರ್ಪಳ ನಿವಾಸಿ ರಾಮ ಪಾಟಾಳಿಯವರ ಪುತ್ರಿ. ಪತಿ ರಾಮದಾಸ್ ಅವರೊಂದಿಗೆ ಮಂಗಳೂರಿನಲ್ಲಿ ನೆಲೆಸಿದ್ದಾರೆ.