ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.
ಮೃತ ಯುವಕನನ್ನು 22 ವರ್ಷದ ಸಾಜಿದ್ ಎಂದು ಗುರುತಿಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಶ್ರೀನಿಧಿ ಎಂಬವರ ಸರ್ವಿಸ್ ಸ್ಟೇಷನ್ ನಲ್ಲಿ ಬೈಕ್ ಸರ್ವಿಸ್ ಮಾಡಲೆಂದು ಸಾಜೀದ್ ಬಂದಿದ್ದನು. ಈ ವೇಳೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ.
ಈ ವೇಳೆ ಕೋಪಗೊಂಡ ಶ್ರೀನಿಧಿ ಹರಿತವಾದ ಆಯುಧದಿಂದ ಸಾಜಿದ್ಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸಾಜಿದ್ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕುಶಾಲನಗರ ಟೌನ್ ಠಾಣಾ ಪೊಲೀಸರು ಆರೋಪಿ ಶ್ರೀನಿಧಿನನ್ನು ಬಂಧಿಸಿದ್ದಾರೆ.










