ಚಿಕ್ಕಮಗಳೂರು : ಕಾಂಗ್ರೆಸ್ ನಾಯಕರ ಮೇಲೆ ಐಟಿ ಹಾಗೂ ಇಡಿ ಅಧಿಕಾರಿಗಳ ದಾಳಿ ಹಿನ್ನಲೆ, ನಗರದ ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಐಟಿ ಹಾಗೂ ಇಡಿ ಇಲಾಖೆಯನ್ನು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.










