ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ಪಟ್ಟಣದ ಮೊರಾರ್ಜಿ ದೇಸಾಯಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಪೊಲೀಸರ ಪ್ರಕಾರ, ಕೊಪ್ಪ ತಾಲೂಕಿನ ನರವೆ ಗ್ರಾಮದ ನಿವಾಸಿ 14 ವರ್ಷದ ಅಮೂಲ್ಯ ಎಂಬ ವಿದ್ಯಾರ್ಥಿನಿ, ಸರ್ಕಾರಿ ಮೊರಾರ್ಜಿ ಶಾಲೆಯ ಹಾಸ್ಟೆಲ್ನ ವಾಶ್ ರೂಂ ಬಾಗಿಲಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಮೃತ ಒಂಬತ್ತನೇ ತರಗತಿ ವಿದ್ಯಾರ್ಥಿಯ ಪೋಷಕರು ಆರೋಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಅಮೂಲ್ಯ ಅವರ ಹಾಸ್ಟೆಲ್ ಮೇಟ್ಗಳು ಮತ್ತು ಸ್ನೇಹಿತರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.










