ಚಿಕ್ಕಮಗಳೂರು  ಜಿಲ್ಲೆಯ 6 ತಾಲೂಕುಗಳಿಗೆ  ಭಾರೀ ಗಾಳಿ-ಮಳೆ ಹಿನ್ನೆಲೆ  ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…

75

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಗಾಳಿ -ಮಳೆಯಾಗುತ್ತಿರುವ ಹಿನ್ನಲೆ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜ್ ಗಳಿಗೆ ಮುಂಜ್ರಾಗತ ಕ್ರಮವಾಗಿ ಇಂದು  ರಜೆ ಘೋಷಣೆ ಮಾಡಲಾಗಿದ್ದು.  ರಸ್ತೆ ಬದಿಯ ಹಳ್ಳ ಕೊಳ್ಳಗಳು ತುಂಬಿ ಹರಿದಲ್ಲಿ ಶಾಲಾ ವಿದ್ಯಾರ್ಥಿಗಳ ಮುಕ್ತ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.