ಚಿಕ್ಕಮಗಳೂರು : ಬೆಳ್ಳಂಬೆಳಗ್ಗೆ ಯುವಕನೋರ್ವನನ್ನು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ನಡೆದಿದೆ.
ಕಾಫಿ ತೋಟಕ್ಕೆ ಹೋಗಿ ಹಿಂದಿರುವಾಗ ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದು, ಹಲ್ಲೆಗೊಳಗಾದ ಯುವಕನನ್ನು ಪ್ರಕೃತ್(29) ಎಂದು ಗುರುತಿಸಲಾಗಿದ್ದು, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಹಾಗೂ ಜಿಲ್ಲಾ ವರಿಷ್ಠಾಧಿಕಾರಿ ಅಕ್ಷಯ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










