ಚಿಕ್ಕಮಗಳೂರು : ದತ್ತಪೀಠ, ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತ, ವಾಹನ ಸಂಚಾರ ನಿಷೇದ…

436
firstsuddi

ಚಿಕ್ಕಮಗಳೂರು : ಭಾರಿ ಮಳೆಯಿಂದಾಗಿ ದತ್ತಪೀಠ ಹಾಗೂ ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತವಾಗಿದ್ದು, ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಹೊನ್ನಮ್ಮನಹಳ್ಳ ರಸ್ತೆ ಬಳಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 14ರವರೆಗೆ ವಾಹನ ಸಂಚಾರ ನಿರ್ಬಂಧಗೊಳಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.