ಚಿಕ್ಕಮಗಳೂರು : ನಾಡ ಬಂದೂಕಿನಿಂದ ವ್ಯಕ್ತಿಯ ಹತ್ಯೆ…

859
firstsuddi

ಚಿಕ್ಕಮಗಳೂರು : ನಾಡ ಬಂದೂಕಿನಿಂದ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿ ಹರೀಶ್(32) ಚಿಕ್ಕಮಗಳೂರು ನಗರ ವಾಸಿ ಎನ್ನಲಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ರಸ್ತೆ ಬದಿ ಎಸೆದು ಹೋಗಿದ್ದು, ಮೃತ ವ್ಯಕ್ತಿಯ ದೇಹದಲ್ಲಿ ಬಂದೂಕಿನ ಗುಂಡುಗಳು ಪತ್ತೆಯಾಗಿದ್ದು, ಶವ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.