ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಕಳೆದ ರಾತ್ರಿಯಿಂದ ಎಡಬಿಡದೆ ದಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮೂಡಿಗೆರೆ, ಶೃಂಗೇರಿ, ಎನ್.ಆರ್. ಪುರ ಹಾಗೂ ಕೊಪ್ಪ ತಾಲ್ಲೂಕಿನಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದ್ದು, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಕುದುರೆಮುಖ ಹಾಗೂ ಕೆರೆಕಟ್ಟೆ ಭಾಗದಲ್ಲಿ ಭಾರಿ ಮಳೆಯಿಂದಾಗಿ ತುಂಗಾಭದ್ರಾ ಹಾಗೂ ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಾಗಿದೆ.










