ತರೀಕೆರೆ : ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ನೇರಲಕೆರೆ ಗ್ರಾಮದಲ್ಲಿ ನಡೆದಿದ್ದು, ಕಾವ್ಯ(20) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎನ್ನಲಾಗಿದ್ದು, ಎಂಟು ತಿಂಗಳ ಹಿಂದೆ ಪ್ರಸನ್ನ ಎಂಬುವವರನ್ನು ವಿವಾಹವಾಗಿದ್ದು, ಮೃತ ಕಾವ್ಯ ಅವರ ಮೈ ಮೇಲೆ ಗಾಯವಾಗಿದ್ದು, ಇದನ್ನು ಗಮನಿಸಿದ ಕಾವ್ಯ ಅವರ ಪೋಷಕರು ನಮ್ಮ ಮಗಳನ್ನು ಹೊಡೆದು ಕೊಲೆ ಮಾಡಿ ನೇಣು ಹಾಕಿರಬಹುದು ಎಂದು ತರೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.










