ತಾಯಿ ಸಾವಿಗೆ ಕಾರಣವಾದ ತಂದೆಯನ್ನೇ ಕೊಲೆಗೈದ ಮಗ…

18
firstsuddi

ದಾವಣಗೆರೆ: ತನ್ನ ತಾಯಿ ಸಾವಿಗೆ ತಂದೆ ಕಾರಣ ಎಂದು ರೊಚ್ಚಿಗೆದ್ದ ವ್ಯಕ್ತಿಯೋರ್ವ ತನ್ನ ತಂದೆಯನ್ನು ಹತ್ಯೆಗೈದಿರುವಂತಹ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಲಕ್ಕಿಂಪುರ ಗ್ರಾಮದಲ್ಲಿ ನಡೆದಿದೆ.

ಕಲ್ಲು ಎತ್ತಿಹಾಕಿ ತಂದೆ ಅಂಜನಪ್ಪ (60)ರನ್ನು ಮಗ ರಮೇಶ್ ಹತ್ಯೆಗೈದಿದ್ದಾನೆ. ನಿತ್ಯ ಕುಡಿದು ಬಂದು ಮನೆಯಲ್ಲಿ ಜಗಳವಾಡುತ್ತಿದ್ದ ಪತಿ ಕಿರುಕುಳಕ್ಕೆ ಬೇಸತ್ತು ತಡರಾತ್ರಿ ಪತ್ನಿ ತಪ್ಪಮ್ಮ(52) ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ತಾಯಿ ಸಾವಿಗೆ ತಂದೆಯೇ ಕಾರಣ ಎಂದು ಹತ್ಯೆ ಮಾಡಲಾಗಿದೆ.

ಸದ್ಯ ಆರೋಪಿಯನ್ನು ಜಗಳೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.