ಬೆಂಗಳೂರು : ಪದ್ಮನಾಭ ನಗರದಲ್ಲಿರುವ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಮಾತನಾಡಿದ ಭವಾನಿ ರೇವಣ್ಣ ಅವರು ನಮ್ಮಿಂದಾಗಿಯೇ ನಿಮಗೆ ಸೋಲಾಗಿದೆ. ನಮ್ಮನ್ನು ಕ್ಷಮಿಸಿ ಬಿಡಿ. ನಿಮ್ಮ ಸೋಲನ್ನು ನಮಗೆ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾನೆ. ಬಳಿಕ ಹಾಸನ ಕ್ಷೇತ್ರದಿಂದ ನೀವು ಸ್ಪರ್ಧಿಸಬೇಕು ಎಂದು ಕಣ್ಣೀರಿಡುತ್ತಲೇ ದೇವೇಗೌಡರನ್ನು ಮಾತನಾಡಿಸಿದರು.










