ಸ್ಯಾಂಡಲ್ ವುಡ್ ನ ಹಿರಿಯ ನಟ ಜೈ ಜಗದೀಶ್ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಮಂಡ್ಯ ಜಿಲ್ಲೆಯ ಜಯರಾಮೇಗೌಡ ಎಂಬುವವರು ನಟ ಜೈ ಜಗದೀಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ಹಲ್ಲೆ ಮಾಡಿದ್ದಾರೆ ಎಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದೂರು ದಾಖಲಿಸಿದ್ದಾರೆ.
ಜೂ.5ರಂದು ಈ ಘಟನೆ ನಡೆದಿದೆ. ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಬಸ್ ನ ಹಿಂದೆಯೇ ಕಾರಿನಲ್ಲಿ ಬರುತ್ತಿದ್ದ ಜೈ ಜಗದೀಶ್ ಅವರು ಕಾರು ನಿಲ್ಲಿಸಿ, ಬಸ್ ನಿಂದ ಬಾಟಲಿ ಎಸೆಯುತ್ತೀಯಾ ಎಂದು ಕೆಟ್ಟದಾಗಿ ನಿಂದಿಸಿದರು. ಮಾತಿಗೆ ಮಾತು ಬೆಳೆದ ನಂತರ ಅವರು ನನ್ನ ಮೇಲೆ ಹಲ್ಲೆಗೆ ಮುಂದಾದರು ಎಂದು ಜಯರಾಮೇಗೌಡ ದೂರು ದಾಖಲಿಸಿದ್ದಾರೆ.
ಆದರೆ ಈ ಬಗ್ಗೆ ನಟ ಜೈ ಜಗದೀಶ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ. ಅಲ್ಲದೇ ಈ ಗಲಾಟೆ ನಡೆಯುವಾಗ ಅಲ್ಲಿದ್ದ ಸ್ಥಳೀಯರು ಬಂದು ಜೈ ಜಗದೀಶ್ ಅವರಿಗೆ ಸಮಾಧಾನ ಮಾಡಲು ಸಹ ಪ್ರಯತ್ನಿಸಿದ್ದಾರೆ. ಆದರೂ ಕೂಡ ಅವರ ಕೋಪ ಕಡಿಮೆಯಾಗಿಲ್ಲ ಎಂದು ದೂರಿನಲ್ಲಿ ಜಯರಾಮೇಗೌಡ ಉಲ್ಲೇಖಿಸಿದ್ದಾರೆ.