ಚಿಕ್ಕಮಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಜಿಲ್ಲೆಯ ಶೃಂಗೇರಿ ಬಳಿಯ ನೆಮ್ಮಾರು ಸಮೀಪದ ತುಂಗಾ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ಹರಿಹರಪುರದ ರಕ್ಷಿತ್ (20) ಹಾಗೂ ಶೃಂಗೇರಿ ಸುಂಕದ ಮಕ್ಕಿಯ ಪ್ರಜ್ವಲ್ (21) ಎಂದು ಗುರುತಿಸಲಾಗಿದೆ. ಕಾಲೇಜಿನಿಂದ ಒಂದು ದಿನದ ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿಗಳ ಗುಂಪು ತುಂಗಾ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಒಬ್ಬ ಮುಳುಗುವುದನ್ನು ರಕ್ಷಣೆ ಮಾಡಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.










