ಉಡುಪಿ: ನಮಾಜ್ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಕುಳಿತಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಸಿಟಿ ಬಸ್ ನಿಲ್ದಾಣ ಸಮೀಪದ ಅಂಜುಮಾನ್ ಮಸೀದಿಯಲ್ಲಿ ನಡದಿದೆ.
ದೊಡ್ಡಣಗುಡ್ಡೆಯ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಮೃತ ವ್ಯಕ್ತಿ. ಮುಸ್ತಾಕ್ ಅವರು ಶುಕ್ರವಾರದ ಜುಮಾ ನಮಾಝ್ ಗಾಗಿ ಬಂದಿದ್ದು ಖುತ್ಭಾ ಕೇಳಲು ಕುಳಿತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತರಾಗಿದ್ದಾರೆ.
ದೊಡ್ಡಣಗುಡ್ಡೆ ಮಸೀದಿಯಲ್ಲಿ ದಫನ ಕ್ರಿಯೆ ನಡೆಯಿತು.










