ನಾಡಿನ ಸಮಸ್ತ ಜನತೆಗೆ ಟ್ವಿಟರ್ ಮೂಲಕ ಹೊಸ ವರ್ಷದ ಶುಭಾಷಯ ಕೋರಿದ ಸಿಎಂ ಬಿ.ಎಸ್. ಯಡಿಯೂರಪ್ಪ…

224
firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಟ್ವಿಟರ್ ಮೂಲಕ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಷಯಗಳನ್ನು ಕೋರಿದ್ದಾರೆ. “ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2020 ಸುಖ, ಸಮೃದ್ಧಿ, ನೆಮ್ಮದಿಯ ವರ್ಷವಾಗಲಿ. ರಾಜ್ಯದಾದ್ಯಂತ ಸಂಭ್ರಮ ನೆಲೆಸಲಿ. ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಕರೆದೊಯ್ಯುವ ನಮ್ಮ ಸಂಕಲ್ಪಕ್ಕೆ ಆ ಭಗವಂತ ಮತ್ತಷ್ಟು ಬಲ ನೀಡಲಿ. ಮತ್ತೊಮ್ಮೆ ತಮ್ಮೆಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ಶುಭಕೋರಿದ್ದಾರೆ.