ನವದೆಹಲಿ : ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಹೇಳಲಾಗಿದೆ.
ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಪ್ರಕರಣ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಮಲ್ಲಿಕಾರ್ಜನ ಖರ್ಗೆ ಅವರಿಗೆ ಸಮನ್ಸ್ ನೀಡಲಾಗಿತ್ತು.










