ವಿಜಯಪುರ : ಪತ್ನಿಯನ್ನು ಕೊಲೆಗೈದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ತೊರವಿ ಗ್ರಾಮದಲ್ಲಿ ನಡೆದಿದ್ದು, ಶ್ರೀದೇವಿ ಸಂತೋಷ ಈಟಿ (28) ಮೃತ ದುರ್ದೈವಿ.
ಕೌಟುಂಬಿಕ ಕಲಹ ಹಿನ್ನಲೆ ಸಂತೋಷ ಈಟಿ (32) ಪತ್ನಿಯನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










