ಬಿಜೆಪಿ ಆಂತರಿಕ ಭಿನ್ನಭಿಪ್ರಾಯದಿಂದ ಪಕ್ಷಕ್ಕೆ ಹಿನ್ನಡೆ: ಆರ್.ಅಶೋಕ್.

21

ಬೆಂಗಳೂರು: ಬಿಜೆಪಿ ಆಂತರಿಕ ಭಿನ್ನಭಿಪ್ರಾಯದಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. 15, 20 ದಿನಗಳಲ್ಲಿ ಎಲ್ಲಾ ಗೊಂದಲಗಳು ಪರಿಹಾರ ಆಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪಕ್ಷದ ಸಹ ಉಸ್ತುವಾರಿ ಸುಧಾಕರ್ ರೆಡ್ಡಿಯವರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಪಕ್ಷದ ವಿಚಾರವನ್ನ ನಾಲ್ಕು ಗೋಡೆ ಮಧ್ಯೆ ಮಾತನಾಡಬೇಕು ಎಂದು ಹೈಕಮಾಂಡ್ ಹೇಳಿದೆ. ನಮ್ಮ ಸಹ ಉಸ್ತುವಾರಿ ಸುಧಾಕರ್ ರೆಡ್ಡಿಯವರು ಕೂಡ ಇದೇ ಹೇಳಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ನಿತ್ಯ ಅಕ್ರಮದಲ್ಲಿ ತೊಡಗಿದೆ. ಲೂಟಿ, ಬಾಣಂತಿಯರ ಸಾವು, ಕಮೀಷನ್, ಮೈಕ್ರೋ ಫೈನಾನ್ಸ್ ಸಾವು ಸೇರಿ ಅನೇಕ ವಿಷಯಗಳಿವೆ. ಇದರ ವಿರುದ್ಧ ನಾವು ಹೋರಾಟ ಮಾಡಬೇಕು. ನಮ್ಮ ಆಂತರಿಕ ಭಿನ್ನಭಿಪ್ರಾಯದಿಂದ ನಮಗೆ ಸ್ವಲ್ಪ ಅಡತಡೆ ಆಗಿದೆ. ಇನ್ನು ಸ್ವಲ್ಪ ದಿನಗಳಲ್ಲಿ ಗೊಂದಲಗಳಿಗೆ ತೆರೆ ಬೀಳಲಿದ್ದು, ಸಹಜವಾಗಿ ಬಿಜೆಪಿ ರೀತಿ ಕೆಲಸ ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.