ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜೋಡೆತ್ತುಗಳ ಭೇಟಿ…

341
firstsuddi

ಬೆಂಗಳೂರು : ಡಿ.ಕೆ.ಶಿವಕುಮಾರ್ ಅವರು ತಿಹಾರ್ ಜೈಲಿನಲ್ಲಿದ್ದಾಗ ಅಲ್ಲಿಗೇ ಹೋಗಿ ಭೇಟಿ ಮಾಡಿ, ಮಾತುಕತೆ ನಡೆಸಿ ಬಂದಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಡಿಕೆಶಿಯವರಿಗೆ ಕೈ ಕುಲುಕಿ ಶುಭಕೋರಿ ಬರಮಾಡಿಕೊಂಡರು. ಇಬ್ಬರೂ ಕೆಲ ನಿಮಿಷಗಳ ಕಾಲ ಮಾತುಕತೆ ನಡೆಸಿದ್ದು, ಡಿ.ಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿ ಬಿಡುಗಡೆಯಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.