ಬೆಳಗಾವಿ : ಏಪ್ರಿಲ್.17 ರಂದು ನಡೆಯುವ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಅಂಗಡಿಯವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಮತ್ತು ಸಚಿವ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ ಮಂಗಳಾ ಅಂಗಡಿಯವರು ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.










