ಮೂಡಿಗೆರೆ : ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು, ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370 ಮತ್ತು 35(ಎ) ವಿಧಿಯನ್ನು ರದ್ದುಗೊಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ನಿರ್ಣಯ ಪ್ರತಿಯೊಬ್ಬ ನಾಗರಿಕರಲ್ಲೂ ಹೆಮ್ಮೆ ಮೂಡಿಸಿದ್ದು, ಕೇಂದ್ರ ಸರ್ಕಾರ ದಿಟ್ಟ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ ಎಂದರು.