ಹುಬ್ಬಳ್ಳಿ: ‘ಯುವರತ್ನ’ ಸಿನಿಮಾದ ಪ್ರಚಾರಕ್ಕಾಗಿ ನಾಳೆ ನಟ ಪುನೀತ್ ರಾಜಕುಮಾರ್ ಅವರು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರೋಡ್ ಶೋ ಮೂಲಕ ನಗರದ ವಿವಿಧ ಚಿತ್ರಮಂದಿರಗಳಿಗೆ ಭೇಟಿ ನೀಡಿ ನಂತರ ನಗರದ ಅರ್ಬನ್ ಓಯಾಸಿಸ್ ಮಾಲ್ನಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಅಭಿಮಾನಿಗಳ ಜೊತೆ ಸಂವಾದ ನಡೆಸಲಿದ್ದಾರೆ.










