ಬೆಂಗಳೂರು : ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸದ ಕಾರಣ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಸ್ಪೀಕರ್ ರಮೇಶ್ ಕುಮಾರ್ ಅವರ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ ಸಿಜೆ ಪೀಠದಲ್ಲಿ ನಾಳೆ ವಿಚಾರಣೆ ನಡೆಯಲಿದೆ. ಅತೃಪ್ತ ಶಾಸಕರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ.










