ಬೆಂಗಳೂರು : ರಾಜ್ಯದ ಹಲವೆಡೆ ಮತ್ತೆ ಭಾರಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಾಲ್ಕು ದಿನಗಳಿಂದ ಬಿಡುವು ಕೊಟ್ಟ ರಣಭೀಕರ ಮಳೆ ಮತ್ತೆ ಆರಂಭವಾಗಿರುವುದು ಮಲೆನಾಡ ಜನರಲ್ಲಿ ಆತಂಕ ಹೆಚ್ಚಿಸಿದೆ.










