ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಸಂಘರ್ಷ ; ಇಬ್ಬರಿಗೆ ಚಾಕು ಇರಿತ…

57
firstsuddi

ಹಾಸನ: ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಸಂಘರ್ಷ ಏರ್ಪಟ್ಟು ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಚನ್ನರಾಯಪಟ್ಟಣ ನಗರದ ಮೇಘಲಕ್ಕೇರಿ ಕಾಡು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮೋತ್ಸವ ಮತ್ತು ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬಾಗೂರು ರಸ್ತೆಯಲ್ಲಿ ಮೆರವಣಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅನ್ಯಕೋಮಿನ ಯುವಕರ ನಡುವೆ ಜಗಳ ಶುರುವಾಗಿದೆ. ಇದು ತಾರಕಕ್ಕೇರಿ ಮುರುಳಿ ಹಾಗೂ ಹರ್ಷ ಎಂಬ ಯುವಕರ ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಸ್ಥಳೀಯರು ಕೂಡಲೇ ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಸ್ಥಳಕ್ಕಾಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.