ರೈಲಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು…

16
firstsuddi

ಬೆಂಗಳೂರು: ರೈಲಿಗೆ ಸಿಲುಕಿ 25 ವರ್ಷದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಗರದ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರತ್ ಹಳ್ಳಿ ಬಳಿ ನಡೆದಿದೆ.

ಆಂಧ್ರದ ಚಿತ್ತೂರಿನ ಶಶಿಕುಮಾರ್, ಲೊಕೇಶ್ ಹಾಗು ಮತ್ತೋರ್ವ ವ್ಯಕ್ತಿ ಮೃತರೆಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಆಗಮಿಸಿದ ಬೈಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ

 ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ ಅಷ್ಟೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.