ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಲ್ಕಿ, ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ರಜೆ ಘೋಷಿಸಿದ್ದಾರೆ.
ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ತಿಳಿಸಿದ್ದಾರೆ.










