ವಿವಾದಿತ ದತ್ತಪೀಠದಲ್ಲಿ ಮುಸಲ್ಮಾನರಿಂದ ನಮಾಜ್?

73
firstsuddi

ಚಿಕ್ಕಮಗಳೂರು : ತಾಲೂಕಿನ ಇನಾಂ ದತ್ತಾತ್ರೇಯ ಪೀಠದಲ್ಲಿ ವಿವಾದದ ಮೇಲೆ ವಿವಾದ ಹುಟ್ಟಿಕೊಳ್ಳುತ್ತಿದೆ. ಮಾಂಸದೂಟ, ಗೋರಿ ಪೂಜೆ ಬಳಿಕ ಮತ್ತೊಂದು ವಿವಾದ ಸೃಷ್ಟಿಯಾಗಿದ್ದು, ದತ್ತಪೀಠದ ಆವರಣದಲ್ಲಿಯೇ ನಮಾಜ್ ಮಾಡುವಂತೆ ಕಾಣುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದತ್ತಪೀಠದ ಆವರಣದಲ್ಲೇ ಮುಸ್ಲಿಮರು ನಮಾಜ್ ಮಾಡುತ್ತಿದ್ದಾರೆ. ಆವರಣ ಮಾತ್ರವಲ್ಲದೇ, ಗುಹೆಯ ಒಳಗೂ ನಮಾಜ್ ಮಾಡುತ್ತಿದ್ದಾರೆ. ಮುಜರಾಯಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎನ್ನಲಾಗುತ್ತಿದೆ.

ಕೋರ್ಟ್ ಜಿಲ್ಲಾಡಳಿತದಿಂದ ನೇಮಿಸಲ್ಪಟ್ಟ ಮುಜಾವರ್ ರಿಂದ ಮಾತ್ರ ದತ್ತ ಪಾದುಕೆ, ಗೋರಿಗಳಿಗೆ ಪೂಜೆಗೆ ಅವಕಾಶ ನೀಡಿತ್ತು. ಆದರೆ, ಕೋರ್ಟ್ ಆದೇಶವನ್ನು ಗಾಳಿಗೆ ತೂರಿ ಪೂಜೆ ಸಲ್ಲಿಸಿದ್ದರು. ಕೋರ್ಟ್ ಆದೇಶದ ಅನ್ವಯ ದತ್ತಪೀಠದ ಭಕ್ತರು ಸೇರಿದಂತೆ ಯಾರಿಗೂ ಯಾವುದೇ ಪೂಜೆ ಪುನಸ್ಕಾರಕ್ಕೆ ಅವಕಾಶವಿಲ್ಲ. ಒಟ್ಟಿನಲ್ಲಿ ಈ ವೀಡಿಯೋ ಸತ್ಯವೋ ಸುಳ್ಳೋ ಎಂಬುದು ಅಧಿಕಾರಿಗಳ ಸ್ಪಷ್ಟನೆಯ ನಂತರವಷ್ಟೇ ತಿಳಿದುಬರಬೇಕಿದೆ.