ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ರಾಜ್ಯ ಸರ್ಕಾರದ ಶಕ್ತಿ ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿವೆ, ಇದರ ಬೆನ್ನಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಸಿದ್ದರಾಮಯ್ಯ ಅವರು, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಜಾರಿಯಲ್ಲಿರುವ ಮಹಿಳೆಯರ ಶಕ್ತಿ ಯೋಜನೆ ಪರಿಷ್ಕರಣೆ ಉದ್ದೇಶ ಇಲ್ಲ. ಸದ್ಯದಲ್ಲಿ ಅಂತಹ ಯಾವುದೇ ಸರ್ಕಾರದ ಹಂತದಲ್ಲಿ ಇಲ್ಲ. ಕೆಲ ಮಹಿಳೆಯರು ಹಾಗೇ ಯೋಜನೆ ಸವಲತ್ತುಗಳು ಬೇಡ ಹೇಳಿದ್ದಾರೆ ಅಂತ ಹೇಳಿಕೆ ನೀಡಿದ್ದಾರೆ. ನಾನು ಇರಲಿಲ್ಲ ಆವಾಗ. ಆದ್ದರಿಂದ ರಾಜ್ಯದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.









