ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ – ಉಲ್ಟಾ ಹೊಡೆದ ರಮೇಶ್ ಜಾರಕಿಹೊಳಿ…

58

ಬೆಳಗಾವಿ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ರಮೇಶ್ ಜಾರಕಿಹೊಳಿ ಅವರು ಉಲ್ಟಾ ಹೊಡೆದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಈಗ ಮುಗಿದ ಅಧ್ಯಾಯ ಎಂದಿದ್ದಾರೆ.

ಈ ಕುರಿತು ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಅಂಕಲಗಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ ನಿಶ್ಚಯಿಸಿದ್ದು ನಿಜ ಆದರೆ ಕೆಲವು ಹಿತೈಷಿಗಳು, ಮಠಾಧೀಶರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದು ಬೇಡ ಎಂದಿದ್ದಾರೆ. ಹಾಗಾಗಿ ಈ ನಿರ್ಧಾರ ಕೈಗೊಂಡಿದ್ದೇನೆ ಎಂದಿದ್ದಾರೆ.

ಇನ್ನೂ ಮಾಜಿ ಸಿಎಂ ಹೆಚ್ ಡಿಕೆ – ಸಂಸದೆ ಸುಮಲತಾ ವಾಕ್ಸಮರ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಹೆಚ್ ಡಿಕೆ- ಸುಮಲತಾ ವಾಗ್ವಾದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ ಅಂತಾ ನಿಗಮದ ಎಂಡಿ ಸ್ಪಷ್ಟಪಡಿಸಿದ್ದಾರೆ. ಆದರೆ ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದೆ ಅಂತಾ ಸುಮಲತಾ ಯಾಕೆ ಹೇಳಿದ್ರೋ ಗೊತ್ತಿಲ್ಲ ಎಂದರು.