ಶೀಲ ಶಂಕಿಸಿ ಪತ್ನಿಯನ್ನ ಕೊಲೆಗೈದ ಪತಿ…

49
firstsuddi

ರಾಯಚೂರು: ಶೀಲ ಶಂಕಿಸಿ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರ ಗ್ರಾಮದಲ್ಲಿ ನಡೆದಿದೆ.

ಪವಿತ್ರಾ (22)ಕೊಲೆಯಾದ ಮಹಿಳೆ. ನಾಗರಾಜ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಆರೋಪಿ ನಾಗರಾಜ್, ಕಳೆದೊಂದು ವರ್ಷದ ಹಿಂದಷ್ಟೆ ಪವಿತ್ರಾಳನ್ನ ಮದುವೆಯಾಗಿದ್ದ. ಇತ್ತೀಚೆಗೆ ನಿತ್ಯ ಪತ್ನಿ ಶೀಲ ಶಂಕಿಸಿ ಕಿರುಕುಳ ಕೊಡುತ್ತಿದ್ದ. ನಿನ್ನೆ ರಾತ್ರಿ ಅನೈತಿಕ ಸಂಬಂಧ ಶಂಕಿಸಿ ನಾಗರಾಜ ಪತ್ನಿಯೊಂದಿಗೆ ಜಗಳಕ್ಕಿಳಿದಿದ್ದಾನೆ. ನಂತರ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಹತ್ಯೆಗೈದಿದ್ದಾನೆ. 

ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.