ಸರ್ಕಾರಿ ಬಸ್- ಬೈಕ್ ನಡುವೆ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು…

52
firstsuddi

ರಾಯಚೂರು: ತಾಲ್ಲೂಕಿನ ಮಿಟ್ಟಿಮಲ್ಕಾಪುರ ಗ್ರಾಮದ ಬಳಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪರಶುರಾಮ್(30), ಗೋವಿಂದ(32), ರಾಘವೇಂದ್ರ(35) ಮೃತರು. ಮೃತಪಟ್ಟವರು ರಾಯಚೂರಿನ ಇಂದಿರಾನಗರದ ಕೃಷಿ ಕಾರ್ಮಿಕರು. ರಾಯಚೂರಿನಿಂದ ಮಂತ್ರಾಲಯ ಮಾರ್ಗವಾಗಿ ಬಸ್ ಹೊರಟಿದ್ದು, ರಾಯಚೂರು ಮಾರ್ಗವಾಗಿ ಬೈಕ್​ನಲ್ಲಿ ಸವಾರರು ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಮೂವರ ಮೃತದೇಹಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಯರಗೇರಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.